ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ದಂಧೆಯನ್ನು ಬಯಲಿಗೆಳೆಯುವಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಕ್ರಮ ಅಡ್ಡೆಯ ಮೇಲೆ ಭರ್ಜರಿ ದಾಳಿ ನಡೆಸಿರುವ ಪೊಲೀಸರು ಭಾರಿ ಪ್ರಮಾಣದ ವಿಷಕಾರಿ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಪರಶುರಾಮ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಹೊರವಲಯದ ಸ್ನೇಹಾರೆಡ್ಡಿ ಡಾಬಾದ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಮಾರಕವಾಗಬಲ್ಲ ರಾಸಾಯನಿಕಗಳನ್ನು…