ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಹೆದರಿಕೆಯಿಲ್ಲದೆ ಎಗ್ಗಿಲ್ಲದೆ ಸಾಗುತ್ತಿದೆ. ಬೆಳಗಿನ ಜಾವ 6 ಗಂಟೆಯಿಂದ ಆರಂಭವಾಗಿ ತಡರಾತ್ರಿಯವರೆಗೂ ಸಣ್ಣಪುಟ್ಟ ಕಿರಾಣಿ ಅಂಗಡಿಗಳು, ಮಿಲಿಟರಿ ಹೋಟೆಲ್ಗಳು ಹಾಗೂ ಡಾಬಾಗಳಲ್ಲಿ ರಾಜಾರೋಷವಾಗಿ ಮದ್ಯ ಸರಬರಾಜಾಗುತ್ತಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರ ಜೀವನದೊಂದಿಗೆ ಆಟವಾಡಲಾಗುತ್ತಿದೆ. ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಕಣ್ಣೆದುರೇ ಈ ಅಕ್ರಮ ದಂಧೆ ನಡೆಯುತ್ತಿದ್ದರೂ, ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ….
ಬೆಂಗಳೂರು: ದಿನಬಳಕೆ ವಸ್ತುಗಳು, ನೀರು ಮತ್ತು ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಈಗ ಮತ್ತೊಂದು ಶಾಕ್ ನೀಡಿದೆ. ಬಜೆಟ್ನಲ್ಲಿ ಘೋಷಿಸಿದಂತೆ ಆದಾಯ ಕ್ರೋಢೀಕರಣದ ಉದ್ದೇಶದಿಂದ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದು, ಮುಂದಿನ ವಾರದಿಂದಲೇ ಹೊಸ ದರಗಳು ಅನ್ವಯವಾಗಲಿವೆ. ವಿಶೇಷವೆಂದರೆ, ಈ ಬಾರಿ ಐಷಾರಾಮಿ ಬ್ರ್ಯಾಂಡ್ಗಳಿಗಿಂತ ಹೆಚ್ಚಾಗಿ ಬಡ ಹಾಗೂ ಮಧ್ಯಮ ವರ್ಗದವರು ಬಳಸುವ ‘ಎಕಾನಮಿ’ ಮತ್ತು ‘ಲೋ ಪ್ರೈಸ್’ ಬ್ರ್ಯಾಂಡ್ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು…