ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ರಾಸಾಯನಿಕ ಮಿಶ್ರಿತ ಕಳಬೆರಕೆ ಸೇಂದಿ ಮಾರಾಟ ದಂಧೆಯನ್ನು ಬಯಲಿಗೆಳೆಯುವಲ್ಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಕ್ರಮ ಅಡ್ಡೆಯ ಮೇಲೆ ಭರ್ಜರಿ ದಾಳಿ ನಡೆಸಿರುವ ಪೊಲೀಸರು ಭಾರಿ ಪ್ರಮಾಣದ ವಿಷಕಾರಿ ಸೇಂದಿಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಪರಶುರಾಮ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಹೊರವಲಯದ ಸ್ನೇಹಾರೆಡ್ಡಿ ಡಾಬಾದ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಮಾರಕವಾಗಬಲ್ಲ ರಾಸಾಯನಿಕಗಳನ್ನು…
ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಹೆದರಿಕೆಯಿಲ್ಲದೆ ಎಗ್ಗಿಲ್ಲದೆ ಸಾಗುತ್ತಿದೆ. ಬೆಳಗಿನ ಜಾವ 6 ಗಂಟೆಯಿಂದ ಆರಂಭವಾಗಿ ತಡರಾತ್ರಿಯವರೆಗೂ ಸಣ್ಣಪುಟ್ಟ ಕಿರಾಣಿ ಅಂಗಡಿಗಳು, ಮಿಲಿಟರಿ ಹೋಟೆಲ್ಗಳು ಹಾಗೂ ಡಾಬಾಗಳಲ್ಲಿ ರಾಜಾರೋಷವಾಗಿ ಮದ್ಯ ಸರಬರಾಜಾಗುತ್ತಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರ ಜೀವನದೊಂದಿಗೆ ಆಟವಾಡಲಾಗುತ್ತಿದೆ. ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಕಣ್ಣೆದುರೇ ಈ ಅಕ್ರಮ ದಂಧೆ ನಡೆಯುತ್ತಿದ್ದರೂ, ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ….